Wednesday, January 14, 2026
Google search engine

Homeರಾಜಕೀಯಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಗೆಲುವು ಖಚಿತ: ಜನಾರ್ದನ ಪೂಜಾರಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಗೆಲುವು ಖಚಿತ: ಜನಾರ್ದನ ಪೂಜಾರಿ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಜನಾರ್ದನ ಪೂಜಾರಿ ಭವಿಷ್ಯ ನುಡಿದರು.

 ಅವರು ಮಂಗಳೂರು ನಗರದ ಲಾಲ್ ಬಾಗ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದ್ಮರಾಜ್ ಆರ್. ಅವರು ಗೆಲುವು ಸಾಧಿಸುತ್ತಾರೆ. ಅವರು ಗೆಲ್ಲೋದು ಗ್ಯಾರಂಟಿ. ಈ ಬಗ್ಗೆ ಯಾವ ಸಂಶಯವೂ ಬೇಡ. ಅವರ ಮಾತನ್ನು ಕೇಳಿದ್ದೀರಿ ಅವರು ಅಹಂಕಾರಿಯಲ್ಲ. ಮುಂದೆ ಎಲ್ಲವೂ ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆಯೇ ಇದ್ದಾನೆ. ಅವನು ನೋಡ್ತಾ ಇದ್ದಾನೆ. ಖಂಡಿತವಾಗಿ ಪದ್ಮರಾಜ್ ಗೆಲ್ತಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular