Monday, April 21, 2025
Google search engine

Homeರಾಜಕೀಯಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ: ಬಿ.ವೈ. ವಿಜಯೇಂದ್ರ

ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ: ಬಿ.ವೈ. ವಿಜಯೇಂದ್ರ

ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು‌.

ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇವಲ ಒಂದು ಜಾತಿಗೆ ಮಾತ್ರ ಸೀಮಿತರಾಗಿಲ್ಲ. ಅವರು ಸಾಮಾನ್ಯ ಕಾರ್ಯಕರ್ತರ ಇಚ್ಛೆಗೆ ಸ್ಪಂದಿಸಲಿದ್ದಾರೆ ಎಂದರು‌.

RELATED ARTICLES
- Advertisment -
Google search engine

Most Popular