ಗುಂಡ್ಲುಪೇಟೆ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿರುವ ಶ್ರೀರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾರ್ಕಂಡೇ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ಶ್ರೀ ರಾಮೇಶ್ವರ ಸ್ವಾಮಿ ದೇವರ ಮೂರ್ತಿಗೆ ಹಾಲು, ಮೊಸರು, ವಿಭೂತಿ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ಮಾಡಿ ದೇವಸ್ಥಾನದ ಅರ್ಚಕರಾದ ಶಂಕರ ನಾರಾಯಣ್ ಜೋಯಿಸಿ ಮಹಾ ಮಂಗಳಾರತಿ ನೆರವೇರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇನ್ನೂ ಭಕ್ತಾದಿಗಳಿಗೆ ದೇವಸ್ಥಾನದ ವತಿಯಿಂದ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.