Wednesday, April 23, 2025
Google search engine

Homeಅಪರಾಧಓಮಿನಿ ವ್ಯಾನ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮೂವರು ಸಾವು

ಓಮಿನಿ ವ್ಯಾನ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮೂವರು ಸಾವು

ದಾವಣೆಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(೨೭), ರಾಕೇಶ್(೩೦) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ ನಂಜುಂಡಪ್ಪ(೮೩) ಮೃತ ದುರ್ದೈವಿಗಳು. ಇನ್ನುಳಿದಂತೆ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular