Monday, April 21, 2025
Google search engine

Homeರಾಜ್ಯಸುದ್ದಿಜಾಲಉಡುಪಿ: ಮನೆಯಲ್ಲಿ ಮತ ಚಲಾಯಿಸಿದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಮನೆಯಲ್ಲಿ ಮತ ಚಲಾಯಿಸಿದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಮೃತಪಟ್ಟ ಘಟನೆ ಇಂದು ಬುಧವಾರ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಪಿ.ಯಶೋಧಾ ನಾರಾಯಣ ಉಪಾಧ್ಯ (೮೩) ಮೃತಪಟ್ಟ ಹಿರಿಯ ಮಹಿಳೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ನಿವಾಸಿಯಾಗಿರುವ ಯಶೋಧಾ, ಚಡಗರ ಅಗ್ರಹಾರದ ನಿವಾಸಿಯಾಗಿದ್ದಾರೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿರುವ ಅವರು, ತನ್ನ ಜೀವನದಲ್ಲಿ ಎಲ್ಲಾ ಚುನಾವಣೆಗಳಲ್ಲೂ ತಪ್ಪದೆ ಹಕ್ಕು ಚಲಾಯಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಕೊಂಚ ಎದೆನೋವು ಇತ್ತು ಎಂದು ಮನೆಯವರ ಬಳಿ ಹೇಳಿಕೊಂಡಿದ್ದರು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳುವುದಾಗಿ ಹೇಳಿದ್ದ ಮಹಿಳೆ ಯಶೋಧಾ ಅವರನ್ನು ಮತ ಪ್ರಕ್ರಿಯೆ ಮುಗಿದ ಮೇಲೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

RELATED ARTICLES
- Advertisment -
Google search engine

Most Popular