Saturday, April 19, 2025
Google search engine

Homeಅಪರಾಧಕುಷ್ಟಗಿ: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ 

ಕುಷ್ಟಗಿ: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ 

ಕುಷ್ಟಗಿ: ಪಿಯು ದ್ವಿತೀಯ ಕಲಾ ವಿಭಾಗದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಬುರ್ತಿ ಗ್ರಾಮದಲ್ಲಿ ನಡೆದಿದೆ.

ವಿಜಯಲಕ್ಷ್ಮಿ ಹೊನ್ನನಗೌಡ ಮಾಲಿಪಾಟೀಲ ಮೃತ ದುರ್ದೈವಿ.

ಕುಷ್ಟಗಿ ಬಾಲಕಿಯರ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ನಿರೀಕ್ಷಿಸಿದ್ದು, ಆಕೆಗೆ ಶೇ.59 ಅಂಕ ಬಂದಿತ್ತು. ಏ.11 ರಂದು  ಮನನೊಂದ ಆಕೆ ತೋಟದಲ್ಲಿದ್ದ ಮನೋಫಟೋಫಾಸ್ ಕ್ರಿಮಿನಾಶಕವನ್ನು ಯಾರಿಗೂ ಗೊತ್ತಾಗದಂತೆ ಮನೆಗೆ ತಂದು ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ.

ತಾಯಿಯ ಗಮನಕ್ಕೆ ಬರುತ್ತಿದ್ದಂತೆ ಕುಷ್ಟಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಕೊಪ್ಪಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಏ.18 ರ ರಾತ್ರಿ 10 ಗಂಟೆಗೆ ಕೊನೆಯುಸಿರೆಳೆದಿದ್ದಾಳೆ.

ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular