Sunday, June 8, 2025
Google search engine

Homeಸ್ಥಳೀಯಮೈಸೂರು-ಕೊಡಗಿನಲ್ಲಿ ಕಾಂಗ್ರೆಸ್ ಅಲೆ : ಕೃಷ್ಣಕುಮಾರ್ ಸಾಗರ್

ಮೈಸೂರು-ಕೊಡಗಿನಲ್ಲಿ ಕಾಂಗ್ರೆಸ್ ಅಲೆ : ಕೃಷ್ಣಕುಮಾರ್ ಸಾಗರ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಲೆ ಇದ್ದು ಎಂ. ಲಕ್ಷ್ಮಣ್ ಗೆಲ್ಲೋದು ಗ್ಯಾರಂಟಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಕುಮಾರ್ ಸಾಗರ್ ಹೇಳಿದರು.

ರಾಮಕೃಷ್ಣನಗರದ ೫೮ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರವಾಗಿ ಮನೆಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷವಾಗಿದ್ದು ಬಿಜೆಪಿ ಪಕ್ಷ ಭ್ರಷ್ಟಾಚಾರ, ಸುಳ್ಳು ಭರವಸೆಗಳು, ಮಂದಿರ ಮಸೀದಿಗಳ ಹೆಸರನ್ನು ಬಳಸಿಕೊಂಡು ಕೋಮುವಾದದ ವಿಷಬೀಜ ಬಿತ್ತಿ ಸಮಾಜದಲ್ಲಿ ಅಶಾಂತಿ ಮೂಡಿಸುವ ದಿನಬಳಕೆಯ ವಸ್ತುಗಳ ಬೆಲೆ ಏರಿಸಿ ಬಡವರು ಬದುಕುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ೫ ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದರಿಂದ ಬಡವರು ನೆಮ್ಮದಿಯಾಗಿ ಬದುಕುತ್ತಿದ್ದಾರೆ. ಆದ್ದರಿಂದ ಎಲ್ಲಾ ಮತದಾರರು ಎಂ. ಲಕ್ಷ್ಮಣ್‌ರವರನ್ನು ಹೆಚ್ಚುಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜೇಂದ್ರಪ್ರಸಾದ್, ಶಂಕರ್, ನಾಗಮ್ಮ, ಹಾಜರಿದ್ದರು.

RELATED ARTICLES
- Advertisment -
Google search engine

Most Popular