Saturday, April 19, 2025
Google search engine

Homeಅಪರಾಧಬೆಂಗಳೂರು: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಅರೆಸ್ಟ್

ಬೆಂಗಳೂರು: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಅರೆಸ್ಟ್

ಬೆಂಗಳೂರು: ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲಿಯಾಸ್‌ ನಗರದ ಶಿಯಾಫ‌ತ್‌ ಉನ್ನೀಸಾ (38) ಕೊಲೆಯಾದ ಮಹಿಳೆ. ಸೋಮವಾರ ರಾತ್ರಿ 7.20ರ ಸುಮಾರಿಗೆ ಘಟನೆ ನಡೆದಿದೆ.

ಈ ಸಂಬಂಧ ಪೊಲೀಸರು ಆರೋಪಿ ನೂರುಲ್ಲಾ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ನೂರುಲ್ಲಾ ಹಾಗೂ ಶಿಯಾಫ‌ತ್‌ ಉನ್ನೀಸಾ ದಂಪತಿ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಆರಂಭದಲ್ಲಿ ಚೆನ್ನಾಗಿದ್ದರು.. ಇತ್ತೀಚೆಗೆ ಕೌಟುಂಬಿಕ ವಿಚಾರಕ್ಕೆ ಶಿಯಾಫ‌ತ್‌ ಉನ್ನೀಸಾ, ಪತಿಯಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಹೀಗಾಗಿ ಆರೋಪಿ ನೂರುಲ್ಲಾ ಕಳೆದ ಐದು ದಿನಗಳಿಂದ ಮನೆಗೆ ಬಂದಿರಲಿಲ್ಲ. ಸೋಮವಾರ ಸಂಜೆ ಶಿಯಾಫ‌ತ್‌ ಉನ್ನೀಸಾ ಮನೆ ಖಾಲಿ ಮಾಡಲು ಮುಂದಾಗಿದ್ದರು. ಈ ವಿಚಾರ ಗೊತ್ತಾಗಿ ಮನೆ ಬಳಿ ಬಂದ ಆರೋಪಿ, ಪತ್ನಿ ಶಿಯಾಫ‌ತ್‌ ಜತೆ ಜಗಳ ತೆಗೆದು ಗಲಾಟೆ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡು ಚಾಕು ತೆಗೆದು ಪತ್ನಿಯ ಕುತ್ತಿಗೆ ಕೊಯ್ದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಿಯಾಫ‌ತ್‌ ಉನ್ನೀಸಾ ತೀವ್ರ ರಕ್ತಸ್ರಾವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಸ್ಥಳೀಯರ ಮಾಹಿತಿ ಪಡೆದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ನೂರುಲ್ಲಾನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular