Monday, April 21, 2025
Google search engine

Homeಅಪರಾಧಬಿಟ್ ಕಾಯಿನ್ ಕೇಸ್: ಡಿವೈಎಸ್ ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್

ಬಿಟ್ ಕಾಯಿನ್ ಕೇಸ್: ಡಿವೈಎಸ್ ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಕೇಸ್‌ನಲ್ಲಿ ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿದ್ದ ಡಿವೈಎಸ್.ಪಿ ಶ್ರೀಧರ್ ಕೆ. ಪೂಜಾರ್‌ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ. ಮೇ ೮ರಂದು ಬೆಳಗ್ಗೆ ೯ ಗಂಟೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಗ್ಗೆ ೯ರಿಂದ ಸಂಜೆ ೬ರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ ೨ ಲಕ್ಷ ರೂ. ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಕೆ. ಪೂಜಾರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೆ ಪೊಲೀಸರು ಆಕ್ಷೇಪಿಸಬಾರದು ಎಂದು ನ್ಯಾ.ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್‌ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್‌ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಫ್‌ಐಆರ್ ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

RELATED ARTICLES
- Advertisment -
Google search engine

Most Popular