Saturday, April 19, 2025
Google search engine

Homeರಾಜ್ಯನಮ್ಮ ದೇಶವನ್ನು ಸರ್ವಾಧಿಕಾರದಿಂದ ಉಳಿಸಬೇಕಾಗಿದೆ: ಅರವಿಂದ್ ಕೇಜ್ರಿವಾಲ್

ನಮ್ಮ ದೇಶವನ್ನು ಸರ್ವಾಧಿಕಾರದಿಂದ ಉಳಿಸಬೇಕಾಗಿದೆ: ಅರವಿಂದ್ ಕೇಜ್ರಿವಾಲ್

ದೆಹಲಿ: ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ೧೪೦ ಕೋಟಿ ಜನರ ಬೆಂಬಲ ಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ ೧ ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಇಂದು ಶನಿವಾರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ ೧೪೦ ಕೋಟಿ ಜನರ ಬೆಂಬಲ ಬೇಕು ಎಂದು ಹೇಳಿದ್ದಾರೆ. ಅವರು (ಬಿಜೆಪಿ) ನನ್ನನ್ನು ಜೈಲಿಗೆ ಕಳುಹಿಸಿದ್ದಾರೆ. ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆಂದು ಪ್ರಧಾನಿ ಹೇಳುತ್ತಾರೆ. ಆದರೆ ಬಿಜೆಪಿ ತಮ್ಮ ಪಕ್ಷದಲ್ಲಿರುವ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular