Wednesday, January 21, 2026
Google search engine

Homeರಾಜ್ಯಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ: ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಬಂದ್

ಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ: ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಬಂದ್


ಹಾಸನ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಶಿರಾಡಿ ಘಾಟ್ ಮಾರ್ಗದಲ್ಲಿ ಮರ ಉರುಳಿ ಬಿದ್ದಿದ್ದು, ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ವಾಹನ ಸಂಚಾರ ಬಂದ್ ಆಗಿದೆ.

ತಿಂಗಳುಗಳ ನಂತರ ಬಿರುಸಿನ ಮಳೆ ಸುರಿದಿದೆ. ಪರಿಣಾಮ ಮರ ಉರುಳಿದ್ದು ವಾಹನಗಳು ಸಂಚಾರ ಮಾಡಲು ಆಗದ ಸ್ಥಿತಿ ಬಂದಿದೆ. ಅರಣ್ಯ, ಹೆದ್ದಾರಿ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮರ ತೆರವಿಗೆ ಯತ್ನ ಆರಂಭಿಸಿದ್ದಾರೆ. ಎರಡು ಗಂಟೆಗೂ ಹೆಚ್ಚುಕಾಲ ವಾಹನಗಳಲ್ಲೆ ಸಿಲುಕಿರುವ ಪ್ರಯಾಣಿಕರು ಪರದಾಡುವಂತಾಗಿದೆ.

RELATED ARTICLES
- Advertisment -
Google search engine

Most Popular