Monday, April 21, 2025
Google search engine

Homeಅಪರಾಧಮದ್ದೂರು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಮದ್ದೂರು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಮಂಡ್ಯ: ಮದ್ದೂರು ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಗ್ರಾಮದಲ್ಲಿ ಚಿರತೆ ಹಾವಳಿ ಬಗ್ಗೆ ಜನರಿಂದ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಜನರ ದೂರು ಆಧರಿಸಿ ಚಿರತೆ ಸೆರೆಗೆ ಅಧಿಕಾರಿಗಳು ಬೋನು ಇಟ್ಟಿದ್ದರು.

ಬೋನಿನಲ್ಲಿ ನಾಯಿ ತಿನ್ನಲು ಬಂದು ಚಿರತೆ ಸೆರೆಯಾಗಿದೆ.

ಸುಮಾರು 3 ವರ್ಷ ಪ್ರಾಯದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು,  ಬೋನಿಗೆ ಬಿದ್ದ ಚಿರತೆ ನೋಡಲು ಜನರು ಮುಗಿಬಿದ್ದಿದ್ದಾರೆ.

ಸೆರೆ ಸಿಕ್ಕ ಚಿರತೆಯನ್ನು ದೂರದ ಅರಣ್ಯಕ್ಕೆ ಬಿಡಲು ಸಿಬ್ಬಂದಿ ಕೊಂಡೊಯ್ದಿದ್ದಾರೆ.

RELATED ARTICLES
- Advertisment -
Google search engine

Most Popular