Saturday, April 19, 2025
Google search engine

Homeರಾಜ್ಯಸುದ್ದಿಜಾಲಭಯೋತ್ಪಾದನಾ ವಿರೋಧಿ ದಿನ: ಪ್ರಮಾಣ ವಚನ ಸ್ವೀಕಾರ ಸಮಾರಂಭ

ಭಯೋತ್ಪಾದನಾ ವಿರೋಧಿ ದಿನ: ಪ್ರಮಾಣ ವಚನ ಸ್ವೀಕಾರ ಸಮಾರಂಭ

ಮಡಿಕೇರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಸಮ್ಮುಖದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ ಬೋಧಿಸಿದರು.
ಅಹಿಂಸೆ ಮತ್ತು ಸಹಿಷ್ಣುತೆಗೆ ಹೆಸರಾದ ಭಾರತದ ಭವ್ಯ ಪರಂಪರೆಯಲ್ಲಿ ನಾವೆಲ್ಲರೂ ದೃಢ ವಿಶ್ವಾಸದಿಂದ ಎಲ್ಲಾ ರೀತಿಯ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಎದುರಿಸುತ್ತೇವೆ ಎಂದು ಪ್ರಮಾಣ ವಚನ ಬೋಧಿಸಿದರು.ಬಸಪ್ಪ ಅವರು ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಜಾಗೃತಿ ಮೂಡಿಸಲು ಪ್ರತಿಜ್ಞೆ ಮಾಡಬೇಕು ಮತ್ತು ಮಾನವನ ಜೀವನ ಮತ್ತು ಮೌಲ್ಯಗಳಿಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಹೋರಾಡಲು ಪ್ರತಿಜ್ಞೆ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಜಿಲ್ಲಾ ಖಜಾಂಚಿ ರಘುನಾಥ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ನಾಗರಾಜು, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಮಮತಾ ಭಾಗವಹಿಸಿ ಪ್ರಮಾಣ ವಚನ ಸ್ವೀಕರಿಸಿದರು.

RELATED ARTICLES
- Advertisment -
Google search engine

Most Popular