Monday, April 21, 2025
Google search engine

Homeರಾಜಕೀಯಕುಮಾರಸ್ವಾಮಿ ಹೊಟ್ಟೆಕಿಚ್ಚಿಗೆ ಯಾವುದೇ ರೀತಿಯ ಔಷಧವಿಲ್ಲ : ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಹೊಟ್ಟೆಕಿಚ್ಚಿಗೆ ಯಾವುದೇ ರೀತಿಯ ಔಷಧವಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸೂಯೆಗೆ ಯಾವುದೇ ರೀತಿಯ ಔಷಧವಿಲ್ಲ. ನಾನು ರಾಜಿನಾಮೇ ಕೊಡಬೇಕು ಎನ್ನುವುದು ಅವರ ಆಸೆ. ಆಸೆ ಪಡುವುದರಲ್ಲಿ ತಪ್ಪೇನು ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಚ್‌ಡಿಕೆಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ನಾನು ಕಿಂಗ್ ಮೇಕರ್ ಆಗುತ್ತೇನೆಂದುಕೊಂಡಿದ್ದರು. ಆದರೆ ಅವರ ಅಧ್ಯಕ್ಷತೆಯಲ್ಲಿ ಕೇವಲ ೧೮ ಸ್ಥಾನಗಳು ಬಂದವು. ನನ್ನ ಅಧ್ಯಕ್ಷತೆಯಲ್ಲಿ ೧೩೬ ಸ್ಥಾನ ಬಂದಿರುವುದಕ್ಕೆ ಅವರಿಗೆ ಅಸೂಯೆ ಎಂದು ಟೀಕಿಸಿದರು.
ಜೆಡಿಎಸ್‌ನವರು ತಮ್ಮ ಶಕ್ತಿ ಕಳೆದುಕೊಂಡಿದ್ದೇವೆಂದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಲಿ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular