ಮಂಗಳೂರು(ದಕ್ಷಿಣ ಕನ್ನಡ): ನವ ಮಂಗಳೂರು ಬಂದರಿನಲ್ಲಿ ಕರ್ನಾಟಕದ ಕಾರ್ಮಿಕರಿಗೆ ಅನ್ಯಾಯವಾಗಿದೆ ಎನ್ನಲಾಗಿದ್ದು, J S W ಸಂಸ್ಥೆಯಿಂದ ಕರ್ನಾಟಕದ ಕಾರ್ಮಿಕರನ್ನು ವಜಾ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಕಾರ್ಮಿಕರಿಂದ ಪಣಂಬೂರಿನ ಕಂಪನಿಯ ಗೇಟ್ ಮುಂಭಾಗ ಪ್ರತಿಭಟನೆ ನಡೆಸಲಾಗಿದ್ದು, ಕಂಪೆನಿಯ ಧೋರಣೆ ವಿರುದ್ಧ ಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ವೇಳೆ ಕಾರ್ಮಿಕ ಪಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನಿಸಿದ್ದಾನೆ.