Sunday, April 20, 2025
Google search engine

Homeಅಪರಾಧಪುಣೆ ಕಾರು ಅಪಘಾತ: ವೇದಾಂತ್​ ರಕ್ತದ ಮಾದರಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪುಣೆ ಕಾರು ಅಪಘಾತ: ವೇದಾಂತ್​ ರಕ್ತದ ಮಾದರಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪುಣೆ: ಪೋರ್ಷೆ ಕಾರು ಅಪಘಾತದ ಆರೋಪಿ ವೇದಾಂತ್​ ಅಗರ್ವಾಲ್ ಅವರ ರಕ್ತದ ಮಾದರಿಯನ್ನು ಬದಲಿಸಿದ್ದ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಪುಣೆಯಲ್ಲಿ 17 ವರ್ಷದ ಬಾಲಕ ವೇದಾಂತ್ ಅಗರ್ವಾಲ್​ ಐಷಾರಾಮಿ ಪೋರ್ಷೆ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸಿಕೊಂಡು ಹೋಗಿ ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ವೇದಾಂತ್​ರನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್ ​ರನ್ನು ಬಂಧಿಸಿದ್ದರು.

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಕಾರು ಚಾಲಕನನ್ನು ಪೊಲೀಸರು ಪ್ರಶ್ನಿಸಿದಾಗ ಆತ ಇಲ್ಲ ವಿಶಾಲ್​ ಅವರೇ ತಮ್ಮ ಮಗನೇ ಕಾರು ಓಡಿಸುತ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೋ ಎಂದಿದ್ದರು ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಅದನ್ನು ತನಿಖೆ ಮಾಡಿದ ಬಳಿಕ ವೇದಾಂತ್​ರ ರಕ್ತದ ಮಾದರಿಯನ್ನು ಬದಲಾಯಿಸಲಾಗಿದೆ ಎನ್ನುವುದನ್ನು ಅರಿತ ಪೊಲೀಸರು ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ವೈದ್ಯರ ಈ ನಡೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಶನಿವಾರ ಮುಂಜಾನೆ, ಚಾಲಕನನ್ನು ಅಪಹರಿಸಿ, ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಚಾಲಕನಿಗೆ ಅಪರಾಧವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕಾಗಿ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular