Saturday, April 19, 2025
Google search engine

Homeರಾಜ್ಯಸುದ್ದಿಜಾಲಮಡಿಕೇರಿ ತಾಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆ

ಮಡಿಕೇರಿ ತಾಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆ

ಮಡಿಕೇರಿ: ಪ್ರಕೃತಿ ವಿಕೋಪ ಎದುರಿಸುವ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಕುರಿತು ಉಪವಿಭಾಗಾಧಿಕಾರಿ ವಿನಾಯಕ ನರವಾಡೆ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಸೋಮವಾರ ನಡೆಯಿತು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮತ್ತು ಭೂಕುಸಿತ ಪ್ರದೇಶಗಳಲ್ಲಿ ಅಗತ್ಯ ಮುಂಜಾಗ್ರತೆ ವಹಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪ್ರತಿ ಹಳ್ಳಿ. ಪಿ.ಎಂ. ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಪ್ರತಿ ದಿನ ಕುಡಿಯುವ ನೀರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿನಾಯಕ ನರವಾಡೆ ಸೂಚಿಸಿದರು.

ಅದೇ ರೀತಿ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ನೀಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಉಪ ವಿಭಾಗಾಧಿಕಾರಿ ಸೂಚಿಸಿದರು. ಮಳೆಗಾಲದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ವಿನಾಯಕ ನರವಾಡೆ ಹೇಳಿದರು.

ತಾಲೂಕು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ರಮೇಶ್ ಬಾಬು, ನೋಡಲ್ ಅಧಿಕಾರಿಗಳಾದ ಶೇಖರ್, ಗಿರೀಶ್, ವಿನಯಕುಮಾರ್, ಲಂಡಾಕ್ಸ್ ಸಹಾಯಕ ನಿರ್ದೇಶಕ ವಿರೂಪಾಕ್ಷ, ತಾಲೂಕು ವೈದ್ಯಾಧಿಕಾರಿ ಚೇತನ್, ತಾ.ಪಂ. ಇಒ ನಾಗಮಣಿ, ನಾಗರಿಕ ವಿಜಯ್, ಸಿಡಿಪಿಒ ಸೀತಾಲಕ್ಷ್ಮಿ, ಕುಡಿಯುವ ನೀರು ಇಲಾಖೆಯ ಎಇಇ ಹರ್ಷದ್ ಪಾಷ, ಹೋಬಳಿ ಮಟ್ಟದ ಕಂದಾಯ ನಿರೀಕ್ಷಕ ಇತರರು ಇದ್ದರು.

RELATED ARTICLES
- Advertisment -
Google search engine

Most Popular