ತಮಿಳುನಾಡು: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ೨೫ ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( ೩೨) ಮೃತ ದುರ್ದೈವಿ.
ಚೆನ್ನೈನ ಆಸ್ಪತ್ರೆಯಲ್ಲಿ ತರಬೇತಿ ಪಡೆಯಲು ಬಂದಿದ್ದ ಸರಣಿತಾ ತರಬೇತಿಗಾಗಿ ಅಯನವರಂನ ಹಾಸ್ಟೆಲ್ನಲ್ಲಿ ತಂಗಿದ್ದರು. ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ಆಕೆಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನಾಮಕ್ಕಲ್ ಜಿಲ್ಲೆಯ ಕಿಲ್ವೆಲ್ಲೂರು ಮೂಲದ ಡಾ.ಸರಣಿತಾ ,೨೦೧೬ ರಲ್ಲಿ ಡಾ.ಉದಯಕುಮಾರ್ ಎಂಬವರನ್ನು ವಿವಾಹವಾಗಿದ್ದರು ಮತ್ತು ಈ ದಂಪತಿಗೆ ೫ ವರ್ಷದ ಮಗುವಿದೆ. ಉದಯಕುಮಾರ್ ಕೊಯಮತ್ತೂರಿನಲ್ಲಿ ಇಎಸ್ಐ ಆಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸರಾಣಿತಾ ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವ್ಯಾಸಂಗಕ್ಕಾಗಿ ಚೆನ್ನೈಗೆ ಬಂದಿದ್ದರು. ಚೆನ್ನೈನ ಆಸ್ಪತ್ರೆಯಲ್ಲಿ ಒಂದು ತಿಂಗಳ ತರಬೇತಿಗಾಗಿ ಇಲ್ಲಿಗೆ ಬಂದಿರುವ ಅವರು ತರಬೇತಿಗಾಗಿ ಮಹಿಳಾ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದಾರೆ.
ಬೆಳಗ್ಗೆ ಸರನಿತಾ ಅವರನ್ನು ಆಕೆಯ ಪತಿ ಮೊಬೈಲ್ ಮೂಲಕ ಸಂಪರ್ಕಿಸಿದ್ದರು. ಆದರೆ ಬಹಳ ಹೊತ್ತಾದರೂ ಫೋನ್ ತೆಗೆಯಲಿಲ್ಲ. ಇದಾದ ಬಳಿಕ ಸರನಿತಾ ಅವರ ಪತಿ ಅವರು ತಂಗಿದ್ದ ಹೊಟೇಲ್ ಆಡಳಿತ ಮಂಡಳಿಗೆ ಕರೆ ಮಾಡಿ ಆಕೆಯ ಕೊಠಡಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ.
ಕೊಠಡಿಯೊಳಗಿದ್ದ ಸರನಿತಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇರುವುದರಿಂದ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಯನಾವರಂ ಪೊಲೀಸರು ಸ್ಥಳಕ್ಕಾಗಮಿಸಿ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಲ್ಯಾಪ್ಟಾಪ್ ಚಾರ್ಜರ್ ಹಿಡಿದುಕೊಂಡ ಸ್ಥಿತಿಯಲ್ಲಿಡಾ.ಸರಣಿತಾ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.