ಬೆಳಗಾವಿ: ಮಂಗಳವಾರ ಜೂ. 4 ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
02-ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬೆಳಗಾವಿ ನಗರದಲ್ಲಿ ನಡೆಯಲಿದೆ. ಕಾಲೇಜಿನ ಆವರಣದಲ್ಲಿ (ಜೂ.2) ಭಾನುವಾರದಂದು ಪ್ರ.ದ.ಕ. ಮಾಧ್ಯಮ ಕೇಂದ್ರದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮತ ಎಣಿಕೆ ಆರಂಭವಾಗುವ ಮುನ್ನ ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರ ಮುಂದೆ ಮತಯಂತ್ರಗಳಿರುವ ಸ್ಟ್ರಾಂಗ್ ರೂಂ ತೆರೆಯಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಅಂಚೆ ಮತ ಎಣಿಕೆಗೆ ಎರಡು ಪ್ರತ್ಯೇಕ ಕೊಠಡಿಗಳನ್ನು ಅಳವಡಿಸಲಾಗಿದೆ. ತಾಂತ್ರಿಕ ಸಮಸ್ಯೆಗಳನ್ನು ನಿರ್ವಹಿಸಲು ಭಾರತೀಯ ಚುನಾವಣಾ ಆಯೋಗವು ಎಂಟು ತಂತ್ರಜ್ಞರನ್ನು ನೇಮಿಸಿದೆ. ಅಂಚೆ ಮತಪತ್ರ -11,148 ಮತಗಳು ಇಲ್ಲಿಯವರೆಗೆ ಬಂದಿವೆ. ಮತ ಎಣಿಕೆ ದಿನದಂದು ಬೆಳಗ್ಗೆ 8 ಗಂಟೆಯವರೆಗೆ ಅಂಚೆ ಮತಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಮತ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇದಲ್ಲದೇ ಮತ ಎಣಿಕೆ ಕೇಂದ್ರದ 200 ಮೀಟರ್ ಸರದಿಯಲ್ಲಿ ಸಿ. ಆರ್.ಪಿ.ಸಿ ಕಲಂ 144ರ ಅನ್ವಯ ನಿಷೇಧವನ್ನೂ ಜಾರಿಗೆ ತಂದಿದ್ದು, ಈ ವ್ಯಾಪ್ತಿಯಲ್ಲಿ ಮೆರವಣಿಗೆ ಅಥವಾ ವಿಜಯೋತ್ಸವಕ್ಕೆ ಅವಕಾಶ ಇರುವುದಿಲ್ಲ.
ಶೇ. 71.49 ಮತದಾನ: 02-ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ. 71.49 ಮತದಾನವಾಗಲಿದೆ. 19,23,788 ಮತದಾರರಲ್ಲಿ 13,75,383 ಮಂದಿ ಮತದಾನ ಮಾಡಿದ್ದಾರೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸುಗಮ ಹಾಗೂ ಪಾರದರ್ಶಕ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದರು.

ಪೊಲೀಸ್ ಬಿಗಿ ಭದ್ರತೆ: ಇದೇ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಒಟ್ಟು ಐದು ಕೆಎಸ್ಆರ್ಪಿ ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗುವುದು. ನಗರದಲ್ಲಿ 300 ಕಡೆ ಸಿಸಿಟಿವಿ ಅಳವಡಿಸಲಾಗಿದ್ದು, ಡ್ರೋನ್ ಮೂಲಕವೂ ನಿಗಾ ಇಡಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ ಇಬ್ಬರು ಡಿಸಿಪಿ ನೇತೃತ್ವದಲ್ಲಿ 13 ಇನ್ಸ್ ಪೆಕ್ಟರ್ ಗಳು ಕಾರ್ಯನಿರ್ವಹಿಸಲಿದ್ದಾರೆ. ಸುಗಮ ಸಂಚಾರ, ಪಾರ್ಕಿಂಗ್ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗುವುದು. ಇದಾದ ಬಳಿಕ ಮತ ಎಣಿಕೆ ಕೊಠಡಿ, ವಾಹನ ನಿಲುಗಡೆ, ಭದ್ರತಾ ಸಿಬ್ಬಂದಿ ನಿಯೋಜನೆ, ಊಟದ ವ್ಯವಸ್ಥೆ, ಮಾಧ್ಯಮ ಕೇಂದ್ರ ಹಾಗೂ ಇತರೆ ಅಧಿಕಾರಿಗಳ ಸೌಲಭ್ಯಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಪರಿಶೀಲಿಸಿದರು.
ಡಿಸಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ ಪಿ.ಎನ್.ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ತಹಸೀಲ್ದಾರ್ ಸಿದ್ದರಾಯ ಭೋಸಗಿ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು.