ಮಡಿಕೇರಿ: ನಗರದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದಲ್ಲಿ ಫೀಲ್ಡ್ ಮಾರ್ಷಲ್ ಕೆ. ಕಾರ್ಯಪ್ಪ ವೃತ್ತದ ಬಳಿ ಪರಿಸರ ಜಾಗೃತಿ ಜಾಥಾಕ್ಕೆ ಎಂ.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲೀಕ ಚಾಲನೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಸುಂದರರಾಜ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಆರ್.ಯೋಗೀಶ್, ಪಾಲಿಕೆ ಆಯುಕ್ತ ವಿಜಯ್, ಸ್ಕೌಟ್ ಮತ್ತು ಗೈಡ್ಸ್ ಪ್ರಧಾನ ಜಿಲ್ಲಾಧಿಕಾರಿ ಕೆ.ಟಿ.ಬೇಬಿ ಮ್ಯಾಥ್ಯೂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ರಾಷ್ಟ್ರೀಯ ಹಸಿರು ಪಡೆ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ್ ಕುಮಾರ್, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳು, ಕ್ಲಬ್ ಮಹೇಂದ್ರ ಪ್ರತಿನಿಧಿಗಳು ಇತರರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ. ಎ.ನಿರಂಜನ ಬದುಕಿದರೆ ಮಾತ್ರ ಮಾನವನ ಬದುಕು ಹಸನಾಗಲು ಸಾಧ್ಯ. ಆ ನಿಟ್ಟಿನಲ್ಲಿ ಪರಿಸರಕ್ಕೆ ಸರಿಯಾಗಿ ಗಿಡ, ಮರಗಳನ್ನು ಬೆಳೆಸಬೇಕು ಎಂದು ಕರೆ ನೀಡಿದರು. ವರ್ಷದಿಂದ ವರ್ಷಕ್ಕೆ, ವಾತಾವರಣದಲ್ಲಿ ಹವಾಮಾನ ಬದಲಾವಣೆಯನ್ನು ಕಾಣಬಹುದು. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದರು. ನಂತರ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ಏರ್ಪಡಿಸಿ ಪರಿಸರದ ಮಹತ್ವದ ಕುರಿತು ಸಂದೇಶ ನೀಡಲಾಯಿತು. ನಗರದ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಹಲವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಗಮನ ಸೆಳೆದರು. ನಂತರ ಆಂಜನೇಯ ದೇವಸ್ಥಾನದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಿ, ಗಮನ ಸೆಳೆದರು.

ಗಮನ ಸೆಳೆದ ಪರಿಸರ ಜಾಥಾ: ಪುರಸಭೆ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ಪರಿಸರ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ಹೊಸಮನಿ ಪುಂಡಲೀಕ ಚಾಲನೆ ನೀಡಿದರು. ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಡಿಸಿಎಫ್ಬಿ. ಭಾಸ್ಕರ್, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ಕೆ.ಟಿ.ಬೇಬಿಮ್ಯಾಥ್ಯೂ, ಎಸಿಎಫ್ ಮೊಹಿಸಿನ್ ಆರ್ಎಫ್ಒ ಪೂಜಾಶ್ರೀ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಆಯುಕ್ತ ವಿಜಯ್ ಇತರರು ಇದ್ದರು.