ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆಯ ತೆರಕಣಾಂಬಿ ಉಪ ಕೇಂದ್ರದಿಂದ ಹೊರಹೊಮ್ಮುವ ಬೊಮ್ಮನಹಳ್ಳಿ, ಕುಂದಕೆರೆ, ದೇಪಾಪುರ ಹಾಗೂ ಬೆರಟಹಳ್ಳಿ ವಿದ್ಯುತ್ ಮಾರ್ಗದಲ್ಲಿನ ಗ್ರಾಮಗಳ ಬಸ್ಬಾರ್ ನಲ್ಲಿ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ನ ಗುಂಡ್ಲುಪೇಟೆ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.