Saturday, April 19, 2025
Google search engine

Homeಅಪರಾಧನಟ ದರ್ಶನ್‌ಗೆ ಹಣ ಸಹಾಯ ಮಾಡಿದ ಆರೋಪ : ಮಾಜಿ ಉಪಮೇಯರ್ ವಿಚಾರಣೆಗೆ ಹಾಜರು

ನಟ ದರ್ಶನ್‌ಗೆ ಹಣ ಸಹಾಯ ಮಾಡಿದ ಆರೋಪ : ಮಾಜಿ ಉಪಮೇಯರ್ ವಿಚಾರಣೆಗೆ ಹಾಜರು

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಸೇರಿದಂತೆ ಎಲ್ಲಾ ೧೭ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಮಾಜಿ ಉಪಮೇಯರ್ ಒಬ್ಬರು ನಟ ದರ್ಶನ್ ಅವರಿಗೆ ಹಣ ಸಹಾಯ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ವಿಚಾರಣೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು .

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮಾಜಿ ಉಪಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ ೪೦ ಲಕ್ಷ ಹಣ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ. ಹಾಗಾಗಿ ಉಪ ಮೇಯರ್ ಮೋಹನ್ ರಾಜ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.

ರೇಣುಕಾ ಸ್ವಾಮಿ ಕೊಲೆಯಾದ ದಿನದಂದೇ ದರ್ಶನ್ ಅವರು ಮೋಹನ್ ರಾಜ್ ಅವರ ಬಳಿ ನಲವತ್ತು ಲಕ್ಷ ಯಾಕೆ ತೆಗೆದುಕೊಂಡರು ಹಾಗೂ ಏನು ಕಾರಣ ಎಂಬುದರ ಕುರಿತು ಪೊಲೀಸರು ಉಪಮೇಯರ್ ಮೋಹನ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮಾಜಿ ಉಪಮೇಯರ್ ಮೋಹನ್ ರಾಜ್ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆಗೆ ಹಾಜರಾಗಿದ್ದಾರೆ. ನಟ ದರ್ಶನ್ ಗೆ ಸಂಬಂಧಪಟ್ಟಂತೆ ಮೋಹನ್ ರಾಜ್ ಅವರು ೪೦ ಲಕ್ಷ ರೂಪಾಯಿ ಹಣ ನೀಡಿದ್ದರು. ನೋಟಿಸ್ ನೀಡಿದ ಬೆನ್ನಲ್ಲೇ ಇದೀಗ ಉಪಮೇಯರ್ ಮೋಹನ್ ರಾಜ್ ಬಸವೇಶ್ವರನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

RELATED ARTICLES
- Advertisment -
Google search engine

Most Popular