Saturday, April 19, 2025
Google search engine

Homeರಾಜ್ಯಕಾಂಗ್ರೆಸ್ ಮಾಡಿದ ತಪ್ಪನ್ನು ಬಿಜೆಪಿ ಪುನರಾವರ್ತಿಸಬಾರದು: ಸಚಿವ ನಿತಿನ್ ಗಡ್ಕರಿ

ಕಾಂಗ್ರೆಸ್ ಮಾಡಿದ ತಪ್ಪನ್ನು ಬಿಜೆಪಿ ಪುನರಾವರ್ತಿಸಬಾರದು: ಸಚಿವ ನಿತಿನ್ ಗಡ್ಕರಿ

ಪಣಜಿ: ಕಾಂಗ್ರೆಸ್ ಮಾಡಿದ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಹಿಂದೆ ಕಾಂಗ್ರೆಸ್ ಮಾಡಿದ ತಪ್ಪುಗಳನ್ನು ಬಿಜೆಪಿ ಪುನರಾವರ್ತಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.

ಗೋವಾದ ಪಣಜಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿಭಿನ್ನತೆಯನ್ನು ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ನಾವು ಇತರೆ ಪಕ್ಷಗಳಿಗಿಂತ ಹೇಗೆ ಭಿನ್ನವಾಗಿದ್ದೇವೆ ಎಂದು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್ ಮಾಡಿದ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ.

ನಾವು ಕೂಡ ಅದೇ ತಪ್ಪುಗಳನ್ನು ಮಾಡಿದ್ದಲ್ಲಿ ಕಾಂಗ್ರೆಸ್ ನಿರ್ಗಮನ ಹಾಗೂ ನಮ್ಮ ಆಗಮನದಿಂದ ಯಾವುದೇ ಪ್ರಯೋಜನ ಉಂಟಾಗುವುದಿಲ್ಲ ಎಂದು ತಿಳಿಸಿದರು. ರಾಜಕೀಯವು, ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆ ತರುವ ಸಾಧನ ಎಂದು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ದೇಶವನ್ನು ರೂಪಿಸಬೇಕು. ಅದಕ್ಕಾಗಿ ಯೋಜನೆ ರೂಪಿಸಿಕೊಳ್ಳಬೇಕು. ಜಾತಿ ರಾಜಕಾರಣ ಮಾಡಬಾರದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular