Saturday, April 19, 2025
Google search engine

Homeರಾಜ್ಯರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ: ಸಂಸದ ಗೋವಿಂದ ಕಾರಜೋಳ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ: ಸಂಸದ ಗೋವಿಂದ ಕಾರಜೋಳ

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಸುದ್ದಿಗೋಷ್ಠಿ ಮಾಡಿದಾಗ ಅವರ ಪಕ್ಕದಲ್ಲಿ ಕುಳಿತುಕೊಳ್ಳಲು ಅವರದೇ ಪಕ್ಷದ ನಾಯಕರು, ಮಂತ್ರಿಗಳು ಹಿಂಜರಿಯುತ್ತಿದ್ದಾರೆ. ಜೊತೆಗೆ ವಿಧಾನಸಭೆಯಲ್ಲೂ ಸಿಎಂ ಒಂಟಿಯಾಗಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರು ಮಾತನಾಡಿದರೆ ಅದನ್ನು ಬೆಂಬಲಿಸಲು ಯಾವ ಶಾಸಕರು, ಸಚಿವರು ಎದ್ದು ನಿಲ್ಲುತ್ತಿಲ್ಲ. ಸಿದ್ದರಾಮಯ್ಯ ಅವರು ಈ ಹಗರಣಗಳಲ್ಲಿ ಸಿಕ್ಕಿ ಹಾಕಿಕೊಂಡರೆ ಎಂದು ಭಯದಿಂದ ಎಲ್ಲರೂ ಅವರನ್ನು ಬಿಟ್ಟು ದೂರ ಸರಿಯುತ್ತಿದ್ದಾರೆ. ಬಿಜೆಪಿ ಕಾಲದ ೨೧ ಹಗರಣಗಳನ್ನು ತನಿಖೆ ಮಾಡುತ್ತಾರಂತೆ. ನೀವು ಒಂದು ವರ್ಷ ಮೂರು ತಿಂಗಳು ಕಡುಬು ತಿನ್ನುತ್ತಿದ್ರಾ ಇಷ್ಟು ದಿನ ಯಾಕೆ ಬಾಯಿ ಮುಚ್ಚಿಕೊಂಡಿದ್ರಿ ದ್ವೇಷ ಮನೋಭಾವನೆಯಿಂದ ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular