Sunday, April 20, 2025
Google search engine

Homeಅಪರಾಧರೇಣುಕಾಸ್ವಾಮಿ ಹತ್ಯೆ ಪ್ರಕರಣ : ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ತಿಂಗಳು ಎರಡನೇ ವಾರದಲ್ಲಿ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರು ನಟ ದರ್ಶನ್ ಹಾಗೂ ಸಹಚರರಿಗೆ ಶಾಕ್ ಎದುರಾಗಿದ್ದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳನ್ನು ಪಡೆದಿರುವ ಪೊಲೀಸರು ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಬಳಿಕ ಫೈನಲ್ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ ಸೇರಿ ೧೭ ಮಂದಿಯನ್ನು ಬಂಧಿಸಲಾಗಿದೆ. ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಿದ್ದು, ಈಗಾಗಲೇ ೨೦೦ಕ್ಕೂ ಹೆಚ್ಚು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಆರೋಪಿಗಳ ಮೊಬೈಲ್ ರಿಟೀವ್ ಗೆ ರವಾನಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.

RELATED ARTICLES
- Advertisment -
Google search engine

Most Popular