Saturday, April 19, 2025
Google search engine

Homeರಾಜ್ಯಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ಸಂಚಾರ ಬಂದ್

ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ಸಂಚಾರ ಬಂದ್

ಹಾಸನ: ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ.ರಾಷ್ಟ್ರೀಯ ಹೆದ್ದಾರಿ ೭೫ ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ.ಗುಡ್ಡ ಕುಸಿತದ ರಭಸಕ್ಕೆ ಬೃಹತ್ ಗಾತ್ರದ ಕಂಟೇನರ್ ಒಂದು ಪಲ್ಟಿಯಾಗಿದೆ. ಅಲ್ಲದೇ ಇತರೆ ವಾಹನಗಳು ಕೂಡ ಸಿಲುಕಿಕೊಂಡಿವೆ. ಪಲ್ಟಿಯಾದ ಕಂಟೇನರ್ ಜೊತೆಗೆ ಚಾಲಕ ಕೂಡ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ

RELATED ARTICLES
- Advertisment -
Google search engine

Most Popular