Saturday, April 19, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಮುಗಿಸಲು ಬಿಜೆಪಿ-ಜೆಡಿಎಸ್ ಹುನ್ನಾರ: ಸಚಿವ ದಿನೇಶ್ ಗುಂಡೂರಾವ್ ಆರೋಪ

ಸಿಎಂ ಸಿದ್ದರಾಮಯ್ಯ ಮುಗಿಸಲು ಬಿಜೆಪಿ-ಜೆಡಿಎಸ್ ಹುನ್ನಾರ: ಸಚಿವ ದಿನೇಶ್ ಗುಂಡೂರಾವ್ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ವರ್ಗದವರ ದೊಡ್ಡ ಧ್ವನಿ. ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯವಾಗಿ ಅವರನ್ನು ಮುಗಿಸಲು ಹುನ್ನಾರ ನಡೆಸಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.

ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವ ವಿಚಾರವಾಗಿ, ಇಲ್ಲಿ ಶನಿವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯದ ಪಾಲಿನ ತೆರಿಗೆ ಹಣ ಬಾರದಿದ್ದಾಗ ದೆಹಲಿಗೆ ನಿಯೋಗ ಕೊಂಡೊಯ್ದು ಪ್ರತಿಭಟಿಸಿದ್ದಾರೆ.

ಸುಪ್ರೀಂಕೋರ್ಟ್ ನಿಂದ ಕೇಂದ್ರಕ್ಕೆ ಛೀಮಾರಿ ಹಾಕಿಸಿ, ಕಳೆದ ವರ್ಷ ಬರ ಪರಿಹಾರ ಪಡೆದಿದ್ದಾರೆ. ಇವೆಲ್ಲ ಬೆಳವಣಿಗೆಯಿಂದ ಕಂಗೆಟ್ಟ ಬಿಜೆಪಿಯವರು, ರಾಜಕೀಯವಾಗಿ ಸಿದ್ದರಾಮಯ್ಯ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.

RELATED ARTICLES
- Advertisment -
Google search engine

Most Popular