Tuesday, January 13, 2026
Google search engine

Homeಸ್ಥಳೀಯಬೈಕ್ ನಿಂದ ಆಯತಪ್ಪಿ ಬಿದ್ದು, ಶಿಕ್ಷಕ ಸಾವು

ಬೈಕ್ ನಿಂದ ಆಯತಪ್ಪಿ ಬಿದ್ದು, ಶಿಕ್ಷಕ ಸಾವು

ಮಂಡ್ಯ: ಬೈಕ್​ ನಿಂದ ಅಯಾತಪ್ಪಿ ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆರೆಗೋಡು ಗ್ರಾಮದ ಬಳಿ ನಡೆದಿದೆ.

ರವಿ(45) ಮೃತ ಶಿಕ್ಷಕ.

ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದ ಪರಿಣಿತ ‌ವಿದ್ಯಾಸಂಸ್ಥೆಯ ಶಿಕ್ಷಕನಾಗಿದ್ದ ಅವರು ಶುಕ್ರವಾರ (ಜು.7) ಬೆಳಗ್ಗೆ ಶಾಲೆಗೆ ತೆರಳುವ ವೇಳೆ ಕೆರೆಗೋಡು ಗ್ರಾಮದ ಬಳಿ ಅಪಘಾತವಾಗಿದ್ದು, ಅಪಘಾತದ ನಂತರ ಕೆಲ ಕಾಲ ಶಿಕ್ಷಕ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರೂ  ಯಾರೊಬ್ಬರು ಕೂಡ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದೆ ಬರದೇ ಅಮಾನವೀಯತೆ ತೋರಿದ್ದಾರೆ.

ಇದರಿಂದ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಕೆರೆಗೋಡು ಪೊಲೀಸ್ ಠಾಣೆ ಸಮೀಪವೇ ನಡೆದಿದ್ದರೂ, ಸ್ಥಳಕ್ಕೆ ಪೊಲೀಸರು ಬರುವುದು ಕೂಡ ತಡವಾಗಿತ್ತು.

RELATED ARTICLES
- Advertisment -
Google search engine

Most Popular