Sunday, April 20, 2025
Google search engine

Homeರಾಜ್ಯನಾಗಮಂಗಲ ಗಲಾಟೆ: ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಸಚಿವ ಪರಮೇಶ್ವರ್

ನಾಗಮಂಗಲ ಗಲಾಟೆ: ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಸಚಿವ ಪರಮೇಶ್ವರ್

ಮಂಡ್ಯ: ನಾಗಮಂಗಲದಲ್ಲಿ ಕಲ್ಲು ತೂರಾಟ ಸಂಭವಿಸಿದ್ದು ಸಣ್ಣ ಘಟನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗಣೇಶ ಮೂರ್ತಿ ವಿಸರ್ಜನೆಯ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಸಣ್ಣ ಘಟನೆಯಾಗಿದ್ದು ಕೋಮು ಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದರು.
ನಾಗಮಂಗಲದಲ್ಲಿ ನಿನ್ನೆ ಘಟನೆ ನಡೆಯಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಇವರು ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular