Sunday, April 20, 2025
Google search engine

Homeರಾಜ್ಯನಾಗಮಂಗಲ ಗಲಭೆಯಲ್ಲಿ ಉಂಟಾದ ನಷ್ಟಕ್ಕೆ ಪರಿಹಾರ ನೀಡಲಾಗುತ್ತೆ : ಸಿಎಂ ಸಿದ್ದರಾಮಯ್ಯ ಘೋಷಣೆ

ನಾಗಮಂಗಲ ಗಲಭೆಯಲ್ಲಿ ಉಂಟಾದ ನಷ್ಟಕ್ಕೆ ಪರಿಹಾರ ನೀಡಲಾಗುತ್ತೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲುತೂರಾಟ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾಗಮಂಗಲ ಶಾಂತವಾಗಿದೆ. ಘಟನೆಯಲ್ಲಿ ಯಾರಿಗೆ ನಷ್ಟವಾಗಿದೆ ಅವರಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಪೊಲೀಸರ ವೈಫಲ್ಯ ಇದೆ ಅಂದಿದ್ದಕ್ಕೆ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ನಾಗಮಂಗಲ ಶಾಂತವಾಗಿದೆ. ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಅಂಗಡಿಗಳು ಬೇಕರಿಗಳು ಸೇರಿದಂತೆ ಎಲ್ಲೆಲ್ಲಿ ಏನೇನು ನಷ್ಟ ಆಗಿದೆ ಅದಕ್ಕೆ ಪರಿಹಾರ ಕೊಡತಕ್ಕಂತ ಕೆಲಸ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

RELATED ARTICLES
- Advertisment -
Google search engine

Most Popular