ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ತಾಲೂಕು ಸಾಮರಸ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಕೊಪ್ಪಲು ಟಿ.ಪುರುಷೋತ್ತಮ್ ಮತ್ತು ಉಪಾಧ್ಯಕ್ಷರಾಗಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ಇವೆರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಪುರುಷೋತ್ತಮ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗೋವಿಂದರಾಜು ಅವರನ್ನು ಹೊರತು ಪಡಿಸಿ ಬೇರೆಯಾರ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು
ಚುನಾವಣಾಧಿಕಾರಿಯಾಗಿ ಸಹಕಾರಿ ಇಲಾಖೆಯ ಸವಿತಾ ಕಾರ್ಯನಿರ್ವಹಿಸಿದರು. ಚುನಾವಣಾ ಸಭೆಯಲ್ಲಿ ಸಂಘದ ನಿರ್ದೇಶಕರಾದ ಸೈಯದ್ ರಿಜ್ಞಾನ್, ಮಂಜು ರಾಜ, ಶಿವಮೂರ್ತಿ, ಕೃಷ್ಣ ನಾಯಕ, ಮಂಜುನಾಥ, ಮರಳಿಧರ, ಪ್ರಕಾಶ, ರವಿ,ಚುಂಚನಕಟ್ಟೆ ಮಂಜುನಾಥ. ಶೀಲಾ. ಬಿ, ಅನುಪಮ, ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಈ ಸಂದರ್ಭದಲ್ಲಿ ಸಮಾನ ಮನಸ್ಕರ ಪ್ರಗತಿಪರ ವೇದಿಕೆಯ ಅಧ್ಯಕ್ಷ .ಪ್ರಭು ಚನ್ನಂಗೆರೆ ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್ , ಪ್ರಧಾನ ಕಾರ್ಯದರ್ಶಿ ಚಿಕ್ಕಕೊಪ್ಪಲು ಸ್ವಾಮಿ ಎಸ್.ಎಂ.ಪಿ.ವಿಯ ಗೌರವಾಧ್ಯಕ್ಷ ಒಂಟಿಮನೆ ನಾಗರಾಜು, ಪತ್ತಿನ ಸಹಕಾರ ಸಂಘದ ಹಾಲಿ ಅಧ್ಯಕ್ಷ ಮೋಹನ್ ಕುಮಾರ್ , ಕಾರ್ಯದರ್ಶಿ ಗಂಗಾಧರ್ ಮತ್ತಿತರರು ಹಾಜರಿದ್ದು ನೂತನ ಅಧ್ಯಕ್ಷ -ಉಪಾಧ್ಯಕ್ಷರನ್ನು ಅಭಿನಂದಿಸಿದರು.