Saturday, April 19, 2025
Google search engine

Homeಅಪರಾಧದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 23ಕ್ಕೆ ಮುಂದೂಡಿದ ಕೋರ್ಟ್

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 23ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ದರ್ಶನ್ ಇಂದು ಬೆಂಗಳೂರಿನ ೫೭ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಈ ಒಂದು ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೈ ಶಂಕರ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ ೨೩ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್‌ಗೆ, ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲದೆ ದರ್ಶನ್ ಜೊತೆಗಿದ್ದ ರೌಡಿಶೀಟರ್ಗಳಾದ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಎಲ್ಲರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಇತ್ತೀಚಿಗೆ ದರ್ಶನ್ ಕಾಣಲು ಬಳ್ಳಾರಿ ಜೈಲಿಗೆ ಬಂದಿದ್ದ ಅವರ ತಾಯಿ ಮೀನಾ ತೂಗುದೀಪ್, ಅಕ್ಕ, ಭಾವ, ಸೋದರ ಅಳಿಯ, ಪತ್ನಿ ವಿಜಯಲಕ್ಷ್ಮಿ ಕೂಡ ಭೇಟಿ ನೀಡಿದ್ದರು. ಈ ವೇಳೆ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಇದಾದ ನಂತರ ಇಂದು ದರ್ಶನ್ ಪರ ವಕೀಲರು ಬೇಲ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಇದೀಗ ೫೭ನೇ ಸಿಸಿಎಚ್ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ ೨೩ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular