Saturday, April 19, 2025
Google search engine

Homeಅಪರಾಧನಟ ದರ್ಶನ್ ಜಾಮೀನು ಅರ್ಜಿ ಅ.4ಕ್ಕೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ಅ.4ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಅ.೪ಕ್ಕೆ ಮುಂದೂಡಿಕೆ ಮಾಡಿದೆ.

ಇಂದು ಸೋಮವಾರ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ೫೭ನೇ ಸಿಟಿ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಬಳಿಕ ಮತ್ತೆ ವಾದ ಮಂಡಿಸಲು ವಕೀಲರು ಕಾಲಾವಕಾಶ ಕೋರಿದ ಕಾರಣ ಅಕ್ಟೋಬರ್.೪ಕ್ಕೆ ಮುಂದೂಡಿಕೆ ಮಾಡಿದೆ.

ಅಂದಹಾಗೇ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಅಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ ಅಲ್ಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿಂದಲೇ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೇ ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ೫೭ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್.೪ಕ್ಕೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular