ಚಿಕ್ಕಮಗಳೂರು : ಕಾಡಾನೆ ದಾಳಿ, ಮೇಯಲು ಕಟ್ಟಿಹಾಕಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ನಡೆದಿದೆ.
ಮಾತ್ರವಲ್ಲದೇ ಬೋಬೇಗೌಡ ಎಂಬುವರ ತೋಟದಲ್ಲಿ ಕಾಡಾನೆ ದಾಂಧಲೆ ಮಾಡಿದ್ದು, ಅಡಿಕೆ-ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ.
ಸ್ಥಳಕ್ಕೆ ಪಶು ವೈದ್ಯ, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲೆನಾಡಲ್ಲಿ ಕಾಡಾನೆ ದಾಂಧಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮಲೆನಾಡಿಗರು ಆಗ್ರಹಿಸಿದ್ದಾರೆ.