Saturday, April 19, 2025
Google search engine

Homeರಾಜ್ಯಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ: ಸಚಿವ ಮಹಾದೇವಪ್ಪ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ: ಸಚಿವ ಮಹಾದೇವಪ್ಪ

ಬೆಂಗಳೂರು: ಮುಡಾ ಕೇಸ್ ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಯಾರು ಏನೇ ಮಾಡಿದರು ಸಿದ್ದರಾಮಯ್ಯ ನೈತಿಕವಾಗಿ ಗಟ್ಟಿಯಾಗಿ ಇದ್ದಾರೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

ಮುಡಾ ಕೇಸ್‌ನಲ್ಲಿ ತನಿಖೆಗೆ ಬರುವಂತೆ ಲೋಕಾಯುಕ್ತ ಸಿಎಂಗೆ ನೋಟಿಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಅವರಿಗೆ ಲೋಕಾಯುಕ್ತರು ನೋಟಿಸ್ ನೀಡಿರುವುದು ಪತ್ರಿಕೆಗಳಲ್ಲಿ ನೋಡಿದ್ದೇನೆ. ಸಿಎಂ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಅವರು ಕೂಡಾ ಕಾನೂನಿನ ಒಳಗೆ ಬರುತ್ತಾರೆ. ಅವರೇ ವಿಚಾರಣೆಗೆ ಹೋಗುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಸಿಎಂ ಮೇಲೆ ಲೋಕಾಯುಕ್ತದಿಂದ ತನಿಖೆ ಸರಿಯಾಗಿ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ತನಿಖೆಗೂ ಅವರ ಸ್ಥಾನಕ್ಕೂ ಸಂಬಂಧವಿಲ್ಲ. ಕಾನೂನು ಎಲ್ಲರಿಗೂ ಒಂದೇ. ಕಾನೂನು ಯಾವತ್ತು ಬದಲಾವಣೆ ಆಗುವುದಿಲ್ಲ ಎಂದರು.

RELATED ARTICLES
- Advertisment -
Google search engine

Most Popular