Tuesday, April 22, 2025
Google search engine

Homeರಾಜ್ಯಡಿಸಿಎಂ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ಆರೋಪಿ ಬಂಧನ

ಡಿಸಿಎಂ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ಆರೋಪಿ ಬಂಧನ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ ೨ ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇವನ ಮಾತನ್ನು ನಂಬಿದ್ದ ಇಂಜಿನಿಯರ್ ೮೦ ಸಾವಿರ ರೂ. ಹಣ ನೀಡಿದ್ದರು. ನಂತರ ಈತ ವಂಚಿಸಿರುವ ಬಗ್ಗೆ ತಿಳಿದು ಸಚಿವರ ಆಪ್ತ ಕಾರ್ಯದರ್ಶಿಗಳು ದೂರು ದಾಖಲಿಸಿದ್ದರು.

ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular