Sunday, April 20, 2025
Google search engine

Homeರಾಜ್ಯಒನಕೆ ಓಬವ್ವ ಒಬ್ಬ ವೀರ ಮಹಿಳೆ: ಚಂದ್ರಭೂಪಾಲ್

ಒನಕೆ ಓಬವ್ವ ಒಬ್ಬ ವೀರ ಮಹಿಳೆ: ಚಂದ್ರಭೂಪಾಲ್

ಶಿವಮೊಗ್ಗ: ಚಿತ್ರದುರ್ಗದ ಒನಕೆ ಓಬವ್ವ ಒಬ್ಬ ವೀರ ಮಹಿಳೆ. ಅವರ ಹೋರಾಟ ಅವಿಸ್ಮರಣಿಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ತಿಳಿಸಿದರು.

ಇಂದು ಕುವೆಂಪು ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಸಾಮಾನ್ಯ ಮಹಿಳೆ ಶತ್ರುಗಳ ದಾಳಿಯಿಂದ ಒಂದು ಸಂಸ್ಥಾನವನ್ನು ಉಳಿಸಿ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಗೌರವಿಸಲ್ಪಟಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಜಗನ್ನಾಥ ಕೆ ಡಾಂಗೆ ಅವರು ಓಬವ್ವನ ಕುರಿತು ಉಪನ್ಯಾಸ ನೀಡಿದ ಅವರು, ನಮ್ಮ ದೇಶದಲ್ಲಿ ಅನೇಕ ರಾಣಿಯರು ಹೋರಾಟವನ್ನು ಮಾಡಿರುವ ಕುರಿತು ಓದಿದ್ದೇವೆ ಆದರೆ ಒಬ್ಬ ಸಾಮಾನ್ಯ ಮಹಿಳೆಯಾದ ಒನಕೆ ಓಬವ್ವ ಹೋರಾಟ ಅತ್ಯಂತ ರೋಮಾಂಚಕವಾಗಿದೆ. ಮಹಿಳೆಯರಿಗೆ ಗೌರವ ಸ್ಥಾನಮಾನ ಗೌರವ ಇಲ್ಲದ ಸಂದರ್ಭದಲ್ಲಿ ಹೈದಾರ್ ಆಲಿ ಸೈನ್ಯದ ವಂಚನೆಯ ದಾಳಿಯಿಂದ ಚಿತ್ರದುರ್ಗ ಸಂಸ್ಥಾನವನ್ನು ರಕ್ಷಿಸುವ ಮೂಲಕ ಇಂದಿಗೂ ಒನಕೆ ಓಬವ್ವನ ಹೆಸರು ಅಜರಾಮರವಾಗಿದೆ ಎಂದರು.
ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಓಬವ್ವನವರ ಜೀವನ ಯೋಶೋಗಾಥೆಯನ್ನು ಮಕ್ಕಳಿಗೆ ತಿಳಿಸಬೇಕು. ಸರ್ಕಾರ ಪಠ್ಯ ಪುಸ್ತಕದಲ್ಲಿ ಪಾಠಗಳ ಮೂಲಕ ಮಕ್ಕಳಿಗೆ ಹೋರಾಟಗಾರನ್ನು ಪರಿಚಯಿಸಬೇಕು. ಮಹಿಳಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಓಬವ್ವನ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಬೇಕು. ಈ ಮೂಲಕ ಅವರ ಹೆಸರನ್ನು ಶಾಶ್ವತವಾಗಿಸುವಂತೆ ಮಾಡಬೇಕಾಗಿದೆ ಎಂದರು.

ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಉಮೇಶ್ ಹೆಚ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರತ್ನ ಮತ್ತು ಛಲವಾದಿ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular