Saturday, April 19, 2025
Google search engine

Homeರಾಜ್ಯಮೋದಿ ಅವರು ಮೊದಲು ಕೊಟ್ಟಿರುವ ಭರವಸೆ ಈಡೇರಿಸಲಿ: ಡಿ.ಕೆ ಶಿವಕುಮಾರ್

ಮೋದಿ ಅವರು ಮೊದಲು ಕೊಟ್ಟಿರುವ ಭರವಸೆ ಈಡೇರಿಸಲಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಮೋದಿ ಅವರು ಮೊದಲು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ. ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡಲಿ ರಾಜ್ಯದಲ್ಲಿ ಜಾಗ ಬೇಕಿದ್ದರೆ ಹೇಳಲಿ, ನಾನೇ ನಿಂತು ಜಾಗ ಕೊಡಿಸುತ್ತೇನೆ ಉದ್ಯೋಗ ನೀಡಲಿ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ವಿಷಯ ಇಲ್ಲದೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಬಿಜೆಪಿಗೆ, ಕುಮಾರಸ್ವಾಮಿಗೆ ನಮ್ಮ ಸರ್ಕಾರದ ಬಗ್ಗೆ ಹೇಳೋದಕ್ಕೆ ಏನೂ ಇಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ದಾರೆ. ಯಾವ ಬಡವರಿಗೂ ಸಹಾಯ ಮಾಡಲಿಲ್ಲ ಎಂದು ಹರಿಹಾಯ್ದರು.

ಕುಮಾರಸ್ವಾಮಿ ರಾಜ್ಯಕ್ಕೆ ಏನು ಮಾಡಿದ್ದಾರೆ ರೀ? ಅವರ ಕೊಡುಗೆ ರಾಜ್ಯಕ್ಕೆ ಏನಿದೆ. ಗಾಳಿಯಲ್ಲಿ ಗುಂಡು ಹೊಡೆಯೋದೇ ಕೊಡುಗೆನಾ? ನಾವು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯಾರು ಏನೂ ಗಾಬರಿ ಪಡಬೇಕಾಗಿಲ್ಲ. ಮೋದಿ ಅವರು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ಧಾರೆ.

RELATED ARTICLES
- Advertisment -
Google search engine

Most Popular