Saturday, April 19, 2025
Google search engine

Homeರಾಜ್ಯಶಸ್ತ್ರಚಿಕಿತ್ಸೆಯ ಬಳಿಕ ನಟ ದರ್ಶನ್ ಮತ್ತೆ ಜೈಲಿಗೆ ಹೋಗಬೇಕು : ಸಚಿವ ಡಾ.ಜಿ ಪರಮೇಶ್ವರ್

ಶಸ್ತ್ರಚಿಕಿತ್ಸೆಯ ಬಳಿಕ ನಟ ದರ್ಶನ್ ಮತ್ತೆ ಜೈಲಿಗೆ ಹೋಗಬೇಕು : ಸಚಿವ ಡಾ.ಜಿ ಪರಮೇಶ್ವರ್

ಮೈಸೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಶಸ್ತ್ರಚಿಕಿತ್ಸೆ ಬಳಿಕ ನಟ ದರ್ಶನ್ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮುಂದುವರೆದು ಬೇಲ್ ಕೇಳಬಹುದು. ಹಾಗಾಗಿ ಅವರಿಗೆ ಬೇಲ್ ಕೊಡಬಾರದು ಅಂತ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕುತ್ತೇವೆ. ಕೊಲೆ ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣ ಬಳಿಕ ಸಂಪೂರ್ಣ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು.

ಚಿಕಿತ್ಸೆಯ ಬಳಿಕ ದರ್ಶನ ವಾಪಸ್ ಜೈಲಿಗೆ ಹೋಗಬೇಕು. ದರ್ಶನ್ ಗೆ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ. ಆಪರೇಷನ್ ಗಳ ಬಗ್ಗೆ ದರ್ಶನ್ ರಕ್ತದೊತ್ತಡ ಕಾರಣವಾಗಿದೆ. ಚಿಕಿತ್ಸೆಗೆ ದರ್ಶನ್ ಸಿದ್ಧರಿದ್ದಾರೆ ಅಂತ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಯಾವಾಗ ಸರ್ಜರಿ ಯಾವ ದಿನಾಂಕದಲ್ಲಿ ಸರ್ಜರಿ ಮಾಡಲಾಗುತ್ತದೆ ಎಂಬುದು ತಿಳಿದಿಲ್ಲ.

ಇಡೀ ವರದಿಯಲ್ಲಿ ಚಿಕಿತ್ಸೆ ಬಗ್ಗೆ ಉಲ್ಲೇಖ ಮಾಡಲಾಗಿದೆ.ಇನ್ನು ನಟ ದರ್ಶನ್ ಗೆ ಚಿಕಿತ್ಸೆಗೆ ತಯಾರಿ ನಡೆಸುತ್ತಾ ಇದ್ದಾರೆ ಎಂದು ವೈದ್ಯಕೀಯ ವರದಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ. ನಿನ್ನೆ ಹೈಕೋರ್ಟಿಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular