Sunday, April 20, 2025
Google search engine

Homeರಾಜ್ಯಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರವನ್ನ ಕಳೆದುಕೊಂಡಿದ್ದೇವೆ : ಸಚಿವ ಜಿ.ಪರಮೇಶ್ವರ್ ಆರೋಪ

ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರವನ್ನ ಕಳೆದುಕೊಂಡಿದ್ದೇವೆ : ಸಚಿವ ಜಿ.ಪರಮೇಶ್ವರ್ ಆರೋಪ

ಬೆಂಗಳೂರು : ಮಹಾರಾಷ್ಟ್ರದಲ್ಲಿ ನಿನ್ನೆ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಮಹಾಯುತಿಯು 230 ಸ್ಥಾನಗಳನ್ನು ಪಡೆದುಕೊಂಡಿದ್ದು ಇನ್ನು ಕಾಂಗ್ರೆಸ್ ನ ಮಹಾ ವಿಕಾಸ್ ಅಘಾಡಿಯು ಕೇವಲ 49 ಸ್ಥಳಗಳನ್ನು ಪಡೆದುಕೊಂಡಿದೆ. ಈ ವಿಚಾರವಾಗಿ ‘EVM’ ಹ್ಯಾಕ್ ನಿಂದ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಬರುತ್ತದೆ ಎಂದು ನಿರೀಕ್ಷೆ ಮಾಡಿದ್ದು ಇದೀಗ ಉಲ್ಟಾ ಆಗಿದೆ. ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ನಿಂದಲೇ ನಮಗೆ ಸೋಲಾಗಿದೆ ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲೂ ಫೇಲ್ ಆಗಿದ್ದೇವೆ. ಬಹಳಷ್ಟು ಕಡೆಗೆ ಇವಿಎಂ ಮ್ಯಾನಿಪ್ಯೂಲೇಟ್ ಮಾಡಿದ್ದಾರ ಎಂಬ ಚರ್ಚೆಯಾಗುತ್ತಿದೆ. ಆದರೆ ಜಾರ್ಖಂಡ್ ಚುನಾವಣೆಯಲ್ಲಿ ಯಾಕೆ ಹಾಗಾಗಲಿಲ್ಲ ಬಿಜೆಪಿಯವರು ಪ್ಲಾನ್ ಆಫ್ ಆಕ್ಷನ್ ರೀತಿ ಇದನ್ನು ಮಾಡುತ್ತಾರೆ. ನಂಬಿಕೆ ಬರಬೇಕೆಂದು ಕೆಲ ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಎಂದು ಜಿ. ಪರಮೇಶ್ವರ್ ತಿಳಿಸಿದರು.

RELATED ARTICLES
- Advertisment -
Google search engine

Most Popular