Monday, June 9, 2025
Google search engine

Homeಸ್ಥಳೀಯಪ್ರಧಾನಿ ಕಚೇರಿ ತಲುಪಿದ ಮುಡಾ ಹಗರಣ : ಇಬ್ಬರು ಆಯುಕ್ತರಿಂದ ೧೦೦ ಕೋಟಿ ನಷ್ಟ :ವಕೀಲ...

ಪ್ರಧಾನಿ ಕಚೇರಿ ತಲುಪಿದ ಮುಡಾ ಹಗರಣ : ಇಬ್ಬರು ಆಯುಕ್ತರಿಂದ ೧೦೦ ಕೋಟಿ ನಷ್ಟ :ವಕೀಲ ರವಿಕುಮಾರ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಕೀಲ ರವಿಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಮಾಜಿ ಆಯುಕ್ತರಾದ ದಿನೇಶ್ ಕುಮಾರ್ ಮತ್ತು ಡಿ.ಬಿ.ನಟೇಶ್ ವಿರುದ್ಧ ೧೦೦ ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ನಷ್ಟ ಉಂಟುಮಾಡಿದ ಆರೋಪ ಮಾಡಿದ್ದಾರೆ. ಸಿಬಿಐ ತನಿಖೆಗೆ ಆಗ್ರಹಿಸಿ, ೨೯೬ ಪುಟಗಳ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿದೆ.
ಮುಡಾ ಹಗರಣದ ಕುರಿತು ಜುಲೈ ೧೯ ರಂದೇ ಪ್ರಧಾನ ಮಂತ್ರಿಗಳಿಗೆ ಲಿಖಿತ ೨೯೬ ಪುಟಗಳ ದೂರು ನೀಡಿದ್ದಾರೆ.

ಮುಡಾ ಮಾಜಿ ಆಯುಕ್ತರಾದ ದಿನೇಶ್ ಕುಮಾರ್, ಡಿ.ಬಿ ನಟೇಶ್ ವಿರುದ್ಧ ಆರೋಪ ಮಾಡಲಾಗಿದ್ದು, ಇಬ್ಬರು ಸೇರಿ ೧೦೦ ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ನಷ್ಟ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಸೇಲ್‌ಡೀಡ್, ಸೆಟಲ್‌ಮೆಂಟ್ ಡೀಡ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ದಿನೇಶ್ ಕುಮಾರ್ ಮತ್ತು ನಟೇಶ್ ಬೇನಾಮಿ ವಹಿವಾಟು ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮುಡಾ ಮತ್ತೊಂದು ಹಗರಣ ಬಯಲು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮೈಸೂರಿನ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ ೨೩ ನಿವೇಶನಗಳನ್ನು ಕೇವಲ ೩ ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಮುಡಾದ ವಿರುದ್ಧ ಕೇಳಿಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ೩೦೦ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ವಕೀಲ ರವಿಕುಮಾರ್ ಆರೋಪಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ದಿನೇಶ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕ ಬಡಾವಣೆಯ ಮಂಜುನಾಥ್‌ನಿಂದ ಮಹಾ ಭೂಗಳ್ಳತನ ನಡೆದಿದೆ ಎಂದು ದೂರಿದ್ದಾರೆ. ಜಾರಿ ನಿರ್ದೇಶನಾಲಯ (ಈಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದ ಮುಡಾ ಮಾಜಿ ಆಯುಕ್ತ ದಿನೇಶ್, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್‌ಗೆ ಪ್ರೋತ್ಸಾಹದಾಯಕ ಯೋಜನೆ ಹೆಸರಿನಲ್ಲಿ ಐದೇ ದಿನಗಳಲ್ಲಿ ಒಂದು ನಿವೇಶನಕ್ಕೆ ೩ ಸಾವಿರ ರೂಪಾಯಿಯಂತೆ ೨೩ ಸೈಟ್‌ಗಳನ್ನು ನೀಡಲಾಗಿದೆ.

ಇನ್ನು, ಕ್ರಯ ಪತ್ರದಲ್ಲಿ ಮಂಜುನಾಥ್ ಯಾವ ಭೂಮಿ ಕಳೆದುಕೊಂಡಿದ್ದರೆ ಎಂಬ ಮಾಹಿತಿ ಇಲ್ಲ. ಆದರೆ, ಪ್ರೋತ್ಸಾಹದಾಯಕ ಎಂದು ನಮೂದಿಸಿ ನಿವೇಶನಗಳನ್ನು ನೀಡಲಾಗಿದೆ. ೫ ಲಕ್ಷ ಶುಲ್ಕ ಪಾವತಿ ಸ್ಥಳದಲ್ಲಿ ಕೇವಲ ೬೦೦ ರೂಪಾಯಿ ಪಾವತಿ ಮಾಡಿಸಿಕೊಂಡು ನಿವೇಶನ ನೀಡಲಾಗಿದೆ.
ಮುಡಾ ಭ್ರಷ್ಟಾಚಾರದ ಬಗ್ಗೆ ಒಂದು ವರ್ಷದ ಹಿಂದೆಯೇ ಕೃಷ್ಣ ಎಂಬವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ನೋಂದಣಾಧಿಕಾರಿ ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್.ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದರು ಎಂದು ವಕೀಲ ರವಿಕುಮಾರ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular