Saturday, April 19, 2025
Google search engine

Homeಅಪರಾಧಕಾನೂನುನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು

ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು

ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ನಾಂಪಲ್ಲಿ ನ್ಯಾಯಾಲಯ ವಿಧಿಸಿತ್ತು, ಇದೀಗ ಹೈಕೋರ್ಟ್​ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ಒಂದು ದಿನ ಅಥವಾ ಸೋಮವಾರದ ವರೆಗೆಯಾದರೂ ಜೈಲು ವಾಸ ಅನುಭವಿಸುವ ಸಾಧ್ಯತೆ ಇದೆ.

ಎಫ್​ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಶಾರುಖ್ ಖಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಉಲ್ಲೇಖ ಮಾಡಿ ಅಲ್ಲು ಅರ್ಜುನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಹೈಕೋರ್ಟ್​ನಲ್ಲಿ ಎಫ್​ಐಆರ್ ರದ್ದು ಸಾಧ್ಯವಾಗಲಿಲ್ಲ. ವಾದ ಮುಂದುವರೆಸಿ, ಮಧ್ಯಂತರ ಜಾಮೀನಿನ ಅರ್ಜಿಯ ವಾದ ಮಂಡಿಸಿದ ಅಲ್ಲು ಅರ್ಜುನ್ ಪರ ವಕೀಲರು ಅರ್ನಬ್ ಗೋಸ್ವಾಮಿ ಪ್ರಕರಣ ಉಲ್ಲೇಖಿಸಿ ವಾದ ಮಂಡಿಸಿದರು.

ಅಲ್ಲು ಅರ್ಜುನ್​ಗೆ, ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು. ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಅಲ್ಲು ಅರ್ಜುನ್​ಗೆ ನಿಯಮಿತ ಅವಧಿಯ ಮಧ್ಯಂತರ ಜಾಮೀನು ಮಂಜೂರು ಮಾಡಿದ ತೆಲಂಗಾಣ ಹೈಕೋರ್ಟ್​, ಬಂಧನ ಈಗಾಗಲೇ ಆಗಿರುವ ಕಾರಣ ಜೈಲು ಸೂಪರಿಂಡೆಂಟ್​ಗೆ ಬಾಂಡ್​ಗಳನ್ನು ನೀಡಿ ಬಿಡುಗಡೆ ಆಗಬಹುದು ಎಂದು ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular