ಬೆಳಗಾವಿ : ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟಿದ್ದ ೭೦ ಲಕ್ಷ ರೂ. ವಿದ್ಯುತ್ ಬಿಲ್ ನೋಟಿಸ್’ನ್ನು ಸರ್ಕಾರ ವಾಪಸ್ ಪಡೆದಿದೆ.
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ನೋಟಿಸ್ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
`ಸಿದ್ದಗಂಗಾ ಮಠದ ಮೇಲೆ ನಮಗೆ ಅಪಾರ ಗೌರವವಿದೆ, ನೀರು ಬಳಸದ ಮಠಕ್ಕೆ ನೋಟಿಸ್ ನೀಡಿದರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.