Monday, April 21, 2025
Google search engine

Homeರಾಜ್ಯಸುದ್ದಿಜಾಲಪಶ್ಚಿಮ ಘಟ್ಟ: 153.80 ಚ.ಕಿ.ಮೀ. ಅರಣ್ಯ ಪ್ರದೇಶ ನಾಶ: ಶಿವಮೊಗ್ಗ ಜಿಲ್ಲೆಗೆ ಮೊದಲ ಸ್ಥಾನ

ಪಶ್ಚಿಮ ಘಟ್ಟ: 153.80 ಚ.ಕಿ.ಮೀ. ಅರಣ್ಯ ಪ್ರದೇಶ ನಾಶ: ಶಿವಮೊಗ್ಗ ಜಿಲ್ಲೆಗೆ ಮೊದಲ ಸ್ಥಾನ

ಶಿವಮೊಗ್ಗ: ಪಶ್ಚಿಮ ಘಟ್ಟದ ಸೆರಗಿನಲ್ಲಿ ಕರ್ನಾಟಕ 10 ಜಿಲ್ಲೆಗಳಿದ್ದು, ಈ ಪೈಕಿ 6ರಲ್ಲಿ ಅರಣ್ಯ ನಾಶ ಹೆಚ್ಚಾಗಿದೆ 2013ರಿಂದ 2023ರ ನಡುವೆ ಈ 6 ಜಿಲ್ಲೆಗಳಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ‘ಭಾರತೀಯ ಅರಣ್ಯ ಸ್ಥಿತಿಗತಿ ವರದಿ-2023’ ಪ್ರಕಾರ, ಹೆಚ್ಚು ಅರಣ್ಯ ನಾಶವಾದ ಜಿಲ್ಲೆಗಳಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 74.54 ಚದರ ಕಿ.ಮೀ., ಕೊಡಗಿನಲ್ಲಿ 33.40 ಚದರ ಕಿ.ಮೀ., ಬೆಳಗಾವಿಯಲ್ಲಿ 24.91 ಚದರ ಕಿ.ಮೀ. ಮತ್ತು ಮೈಸೂರಿನಲ್ಲಿ 15.28 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ಇಲ್ಲವಾಗಿದೆ. ಹಾಸನ ಮತ್ತು ಚಾಮರಾಜನಗರದಲ್ಲಿ ಅರಣ್ಯದ ವಿಸ್ತೀರ್ಣ ಕೊಂಚ ಕುಸಿದಿದೆ ಎಂದು ಹೇಳಲಾಗಿದೆ.

ಈ ಎಲ್ಲಾ ಜಿಲ್ಲೆಗಳಲ್ಲಿ ಅತಿದಟ್ಟಾರಣ್ಯದ ವ್ಯಾಪ್ತಿ 2013ರಿಂದ 2023ರ ನಡುವೆ ಹೆಚ್ಚಾಗಿದ್ದು, ದಟ್ಟಾರಣ್ಯದ ವ್ಯಾಪ್ತಿ ಸ್ವಲ್ಪ ಕುಸಿದಿದೆ. ಪಶ್ಚಿಮ ಘಟ್ಟದ ಅಂಚಿನಲ್ಲಿರುವ ಸಾಧಾರಣ ಅರಣ್ಯವು ಜನವಸತಿ ಮತ್ತು ವಾಣಿಜ್ಯ ಬೆಳೆ ಚಟುವಟಿಕೆ ಪ್ರದೇಶಗಳಿಗೆ ಹೊಂದಿಕೊಂಡಿರುವುದರಿಂದ ಇಲ್ಲೇ ಅತಿಹೆಚ್ಚು ಅರಣ್ಯ ನಾಶವಾಗಿರುತ್ತದೆ.

ಇನ್ನು ಮರಗಳ ಹಸಿರಿನ ಹೊದಿಕೆ ಶೇ 10ರಿಂದ ಶೇ 40ರಷ್ಟು ಇರುವ ಕಾಡನ್ನು ಸಾಧಾರಣ ಅರಣ್ಯ ಎಂದು ವಿಂಗಡಿಸಲಾಗಿದೆ. ಪಶ್ಚಿಮ ಘಟ್ಟದ ಶೋಲಾ ಕಾಡುಗಳೂ ಇದರ ವ್ಯಾಪ್ತಿಗೆ ಬರುತ್ತವೆ. ವಾಣಿಜ್ಯ ಬೆಳೆ ಪ್ರದೇಶಗಳಿಗೆ ಹೊಂದಿಕೊಂಡಿರುವ ಈ ಅರಣ್ಯ ಪ್ರದೇಶಗಳಿಗೆ ಆಕ್ರಮಣಕಾರಿ ಸಸ್ಯಪ್ರಬೇಧಗಳು ದಾಟಿಕೊಂಡಿವೆ. ಇದರಿಂದ ಸ್ಥಳೀಯ ಅರಣ್ಯ ಸಸಿ, ಮರ, ಹುಲ್ಲು ಪ್ರಬೇಧಗಳಿಗೆ ಮತ್ತು ವನ್ಯಜೀವಿಗಳಿಗೆ ಕಂಟಕ ಎದುರಾಗಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular