ಚಾಮರಾಜನಗರ : ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ಒಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಅದೇ ಗ್ರಾಮದ ಖುಷ್ಬು (32) ಎಂದು ತಿಳಿದುಬಂದಿದೆ. ಮೂಲತಃ ಬೆಂಗಳೂರು ಮೂಲದ ವರಾದ ಖುಷ್ಬು ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.