ಬಳ್ಳಾರಿ : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದ್ದು, ಇದೀಗ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿಯ ಸಾವಾಗಿದೆ.ಮಂಗಳವಾರ ಸಂಜೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಬಾಣಂತಿಯನ್ನು ರೇಷ್ಮಾಬಿ ಗೌಸ್ಫೀರ್ (25) ಎಂದು ತಿಳಿದುಬಂದಿದೆ.ರೇಷ್ಮಾಗೆ ಜನವರಿ 4ರಂದು ಸಿಜೇರಿಯನ್ ಹೆರಿಗೆ ಮಾಡಲಾಗಿತ್ತು. ನಾಲ್ಕು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದರು. ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಜ.14ರಂದು ಮತ್ತೆ ವಿಮ್ಸ್ಗೆ ದಾಖಲಿಸಿ ಕೃತಕ ಉಸಿರಾಟದಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತಾದರೂ, ಮಂಗಳವಾರ ಸಾವನ್ನಪ್ಪಿದ್ದಾರೆ.
ಈ ಕುರಿತು ವೈದ್ಯರು ಸರಿಯಾಗಿ ಚಿಕಿತ್ಸೆ ಕೊಟ್ಟಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಲೇ ರೇಷ್ಮಾ ಸಾವಾಗಿದೆ ಎಂದು ಮೃತಳ ಪತಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ವೈದ್ಯರು ರೇಷ್ಮಾ ಅವರಿಗೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಸಿಸೇರಿಯನ್ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವೂ ಎಲ್ಲ ರೀತಿಯ ಚಿಕಿತ್ಸೆಗಳನ್ನು ನೀಡಿದ್ದೆವು ಎಂದು ತಿಳಿಸಿದ್ದಾರೆ.