Saturday, June 7, 2025
Google search engine

Homeರಾಜ್ಯಸುದ್ದಿಜಾಲಯಾವುದೇ ಲೋಪವಿಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ -03 ಅನ್ನು ಸುಗಮವಾಗಿ ನಡೆಸಿ : ಬಿ. ಸಿ...

ಯಾವುದೇ ಲೋಪವಿಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ -03 ಅನ್ನು ಸುಗಮವಾಗಿ ನಡೆಸಿ : ಬಿ. ಸಿ ಶಿವಾನಂದಮೂರ್ತಿ

ಮಂಡ್ಯ: ಜಿಲ್ಲೆಯಲ್ಲಿಜೂನ್ ೦೯ ರಿಂದ ೨೦ ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -೦೩ ನಡೆಯಲಿದ್ದು, ಪರೀಕ್ಷೆಯುಯಾವುದೇ ಲೋಪದೋ?ವಿಲ್ಲದೆ ಸುಗಮವಾಗಿ ನಡೆಸಿ ಎಂದುಅಪರಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -೩ ರ ಪೂರ್ವ ಸಿದ್ದತಾ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದಅವರುಜಿಲ್ಲೆಯಲ್ಲಿಒಟ್ಟು ೦೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು ೨,೪೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಎಂದರು.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಒಟ್ಟು ೦೫ ಮಾರ್ಗಗಳನ್ನು ನಿಗಧಿ ಪಡಿಸಲಾಗಿದ್ದು, ೫ ಮಾರ್ಗಗಳ ಕಾರ್ಯನಿರ್ವಹಿಸಲು ತಹಶೀಲ್ದಾರರು, ಬಿ.ಇ.ಒ ಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ-ಸದಸ್ಯ ಸಮಿತಿಯನ್ನುರಚಿಸಲಾಗಿದೆಎಂದು ಹೇಳಿದರು.

ಉತ್ತಮ ಮೂಲ ಸೌಕರ್ಯ ಮತ್ತು ಪೀಠೋಪಕರಣಗಳನ್ನು ಹೊಂದಿರುವ ೦೭ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಸದರಿ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರಅಗತ್ಯ ಸೌಕರ್ಯಗಳು ಪರಿಶೀಲಿಸುವಂತೆ ತಿಳಿಸಿದರು.

ಜಿಲ್ಲೆಯಎಲ್ಲಾ ೦೭ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಯಾಗಿದ್ದು, ವೆಬ್ ಕಾಸ್ಟಿಂಗ್ ಕಣ್ಗವಲಿನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು. ಪರೀಕ್ಷೆ ಸುಗಮವಾಗಿ ನಡೆಸಲು ೦೭ ಪರೀಕ್ಷಾ ಕೇಂದ್ರಗಳಿಗೂ ಮುಖ್ಯಅಧೀಕ್ಷಕರನ್ನು ನೇಮಕ ಮಾಡಲಾಗಿದೆ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜುಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ಮೀ ನಿ?ದಾಜ್ಞೆ ಜಾರಿಗೊಳಿಸಲಾಗಿದೆ.ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಲು ಆದೇಶಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಚಲುವಯ್ಯ, ನಗರ ಸಭೆಯ ಪರಿಸರ ಉಪವಿಭಾಗಅಭಿಯಂತರರಾದರುದ್ರೇಗೌಡ ಹಾಗೂ ಜಿಲ್ಲಾಕುಟುಂಬ ಕಲ್ಯಾಣಅಧಿಕಾರಿಡಾ.ಬೆಟ್ಟಸ್ವಾಮಿ ಸೇರಿದಂತೆಇನ್ನಿತರ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular