Monday, June 9, 2025
Google search engine

Homeರಾಜ್ಯಸುದ್ದಿಜಾಲಕಡಬ: ಇಚ್ಚಂಪಾಡಿ ಸೇತುವೆ ಬಳಿ ಯುವಕ ನೀರಿನಲ್ಲಿ ಮುಳುಗಿ ಸಾವು

ಕಡಬ: ಇಚ್ಚಂಪಾಡಿ ಸೇತುವೆ ಬಳಿ ಯುವಕ ನೀರಿನಲ್ಲಿ ಮುಳುಗಿ ಸಾವು

ಮಂಗಳೂರು (ದಕ್ಷಿಣ ಕನ್ನಡ): ಕಡಬ ತಾಲೂಕಿನಲ್ಲಿ ಇಚ್ಲಂಪಾಡಿ ಗ್ರಾಮದ ಸೇತುವೆ ಬಳಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಧ್ಯಾಹ್ನ ನಡೆದಿದೆ.

ಮೃತಪಟ್ಟ ಯುವಕನನ್ನು‌ ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ. ಯುವಕನು ಮಂಗಳೂರಿನಲ್ಲಿ  ಮೆಡಿಕಲ್ ರೆಪ್  ಕೆಲಸ ಮಾಡುತ್ತಿದ್ದು ರಜೆಯ ಸಂದರ್ಭ ಮನೆಯಲ್ಲೇ ಇದ್ದನು. ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ ಸ್ನೇಹಿತರ ಜೊತೆ ಇಚ್ಚಂಪಾಡಿ ಸೇತುವೆ ಬಳಿ ಇರುವ ಗುಂಡ್ಯ ಹೊಳೆಗೆ ಸ್ನಾನಕ್ಕೆ ಇಳಿದನು. ಆದರೆ ಹೊಳೆಯ ನೀರಿನ ಆಳತೆ ಅರಿಯದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸ್ಥಳೀಯರು ಚೇತನನನ್ನು ನೀರಿನಿಂದ ಹೊರತೆಗೆದಿದ್ದರೂ. ಆ ವೇಳೆಗೆ ಆತ ಪ್ರಾಣ ಕಳೆದುಕೊಂಡಿದ್ದ.
ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular