ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ವಿಧಾನಸೌಧದ ಮೆಟ್ಟಿಲುಗಳಲ್ಲಿ ಕಾಲ್ತುಳಿತವಾಗಿಲ್ಲ” ಎಂಬ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ, “ಸಿದ್ದರಾಮಯ್ಯನವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ?” ಎಂದು ಅವರು ಪ್ರಶ್ನಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನ ಸತ್ತಿದ್ದಾರೆ ಎಂಬುದನ್ನು ಸಿಎಂ ಉಲ್ಲೇಖಿಸಿದ ರೀತಿಯೂ ಪ್ರಶ್ನಿಸಿದ್ದಾರೆ. ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ?ಪ್ರತಿಪಕ್ಷಗಳನ್ನು ದೂರಿ ತಪ್ಪಿಸಿಕೊಳ್ಳುವ ಹುನ್ನಾರವೇನು? ಎಂದು ತೀವ್ರ ಟೀಕೆ ಮಾಡಿದ್ದಾರೆ.