Monday, June 16, 2025
Google search engine

Homeರಾಜ್ಯಸುದ್ದಿಜಾಲರಾಷ್ಟ್ರೀಯ ಮಟ್ಟದ ತೀರ್ಪುಗಾರರಾಗಿ ದೀಪಕ್ ಪೆರಾಜೆ ಆಯ್ಕೆ

ರಾಷ್ಟ್ರೀಯ ಮಟ್ಟದ ತೀರ್ಪುಗಾರರಾಗಿ ದೀಪಕ್ ಪೆರಾಜೆ ಆಯ್ಕೆ

ಮಂಗಳೂರು(ದಕ್ಷಿಣ ಕನ್ನಡ): ರಾಜಸ್ಥಾನದ ಜೈಪುರದಲ್ಲಿ ಇತ್ತೀಚಿಗೆ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ದೀಪಕ್ ಪೆರಾಜೆ ಇವರು ಉತ್ತೀರ್ಣರಾಗಿ ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.

ಇವರು ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ದಾಮೋದರ ಸುವರ್ಣ ಮತ್ತು ಲಲಿತ ದಂಪತಿಯ ಪುತ್ರರಾಗಿದ್ದು, ಸದ್ಯ ಬಂಟ್ವಾಳದ ಹಿರಿಯ ನೋಟರಿ ವಕೀಲರಾದ ಪಿ.ಜಯರಾಮ್ ರೈ ಇವರ ಕಛೇರಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸುವ ಜೊತೆಗೆ ಮಾಣಿಯಲ್ಲಿ ಸ್ವಂತ ಕಛೇರಿ ಹೊಂದಿದ್ದಾರೆ.‌

ಕಳೆದ 9 ವರ್ಷಗಳಿಂದ ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಜೂನಿಯರ್ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿರುವ ಇವರು ಸತತ 3 ಬಾರಿ ಕರ್ನಾಟಕ ‌ರಾಜ್ಯ ಕಾನೂನು ವಿಶ್ವವಿದ್ಯಾನಿಲಯವನ್ನು ದಕ್ಷಿಣ ಭಾರತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರತಿನಿಧಿಸಿದ್ದಾರೆ.
ಅಲ್ಲದೇ ಪೆರಾಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಯುವವಾಹಿನಿ (ರಿ)ಮಾಣಿ ಘಟಕದ ಕಾರ್ಯದರ್ಶಿಯಾಗಿ, ಪೆರಾಜೆ ಶ್ರೀವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular